ಉಡುಪಿ: ಚಾಲಕ ತಲೆ ತಿರುಗಿ ಅಸ್ವಸ್ಥಗೊಂಡ ಪರಿಣಾಮ ಮಂಗಳೂರಿAದ ಉಡುಪಿಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಉಡುಪಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾದ ಹಿನ್ನೆಲೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, 21 ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಉದ್ಯಾವರ ಜಯಲಕ್ಷ್ಮೀ ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ, ಬಲಾಯಿಪಾದೆ ಸಮೀಪಿಸುತ್ತಿದ್ದಂತೆ ಬಸ್ ಚಾಲಕನಿಗೆ ತಲೆ ಸುತ್ತು ಬಂದಿದೆ ಎನ್ನಲಾಗಿದೆ. ನೋಡ ನೋಡುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ಕಂಬಕ್ಕೆ ಡಿಕ್ಕಿಯಾಗಿದೆ. ಬಳಿಕ ರಸ್ತೆಗೆ ಅಪ್ಪಳಿಸಿದೆ. ಇದರ ಪರಿಣಾಮ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಲಾಯಿಪಾದೆ ಬಸ್ ಅಪಘಾತ: ಚಾಲಕ ಗಂಭೀರ, 21 ಮಂದಿ ಪ್ರಯಾಣಿಕರಿಗೆ ಗಾಯ
Subscribe
Login
0 Comments