Wednesday, June 18, 2025

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದಿರುವುದಕ್ಕೆ ನೈಜ ಕಾರಣ ಹೇಳಲಿ:ಗೋಪಾಲ ಪೂಜಾರಿ

ಕುಂದಾಪುರ: ಪ್ರಮೋದ್ ಮಧ್ವರಾಜ್‌ಗೆ ಕಾಂಗ್ರೆಸ್ ಎಲ್ಲಾ ಅವಕಾಶ ನೀಡಿದ್ದು, ಅದನ್ನು ಬಳಸಿಕೊಂಡಿದ್ದರೂ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರಿದ ನೈಜ ಕಾರಣವನ್ನು ಜನರ ಮುಂದಿಡಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದ್ದಾರೆ.
ಕುಂದಾಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಮೊದಲ ಬಾರಿ ಪ್ರಮೋದ್ ಶಾಸಕರಾಗಿ ಆಯ್ಕೆ ಆಗಿದ್ದರೂ ಅವರಿಗೆ ರಾಜಕೀಯ ಕಾರ್ಯದರ್ಶಿ, ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಯಿತು.
ಕಳೆದ ಚುನಾವಣೆಯಲ್ಲಿ ಸೋತ ಬಳಿಕ ಪ್ರಮೋದ್ ಮಧ್ವರಾಜ್ ಅವರು ಯಾವುದೇ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ಹಿರಿಯ ನಾಯಕರಾದ ಆಸ್ಕರ್ ಫೆರ್ನಾಂಡೀಸ್ ಅವರು ಪ್ರಮೋದ್ ಅವರನ್ನು ಪಕ್ಷದಲ್ಲೇ ಇರಿಸಿಕೊಳ್ಳಲು ಮನದಟ್ಟು ಮಾಡಿದ್ದರು. ಪಕ್ಷದೊಂದಿಗೆ ಭಿನ್ನಮತ ಸರಿಪಡಿಸಲು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಪ್ರಮೋದ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಜಿಲ್ಲಾಧ್ಯಕ್ಷರ ವಿರುದ್ಧ ಹಾಗೂ ಸಣ್ಣಪುಟ್ಟ ಸಬೂಬು ಹೇಳುವ ಬದಲು ಪಕ್ಷ ಬಿಟ್ಟ ಹಿನ್ನೆಲೆ ಏನು ಎನ್ನುವುದು ಜನರಿಗೆ ತಿಳಿಸಬೇಕು. ಅವರಿಗೆ ಐಟಿ ಸಮಸ್ಯೆ, ಉದ್ಯೋಗ ಸಮಸ್ಯೆ ಅಥವಾ ಯಾವುದೇ ಒತ್ತಡವಿತ್ತೇ ಎಂದು ಸಾರ್ವಜನಿಕರೆದುರು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಇನ್ನು, ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲಾ ಗೌರವವನ್ನು ನೀಡಿದೆ. ಅವರು ಪಕ್ಷ ತೊರೆದ ಬಗ್ಗೆ ಓರ್ವ ಆತ್ಮೀಯ ಸ್ನೇಹಿತನಾಗಿ ನನಗೆ ನೋವಿದೆ. ನಮ್ಮ ಪಕ್ಷಕ್ಕಿಂತ ಒಳ್ಳೆ ಸ್ಥಾನ ನೀಡುವ ಆಶ್ವಾಸನೆ ಹಿನ್ನೆಲೆ ಅವರು ಆ ಪಕ್ಷಕ್ಕೆ ಹೋಗಿರಬಹುದು ಎಂದು ಗೋಪಾಲ ಪೂಜಾರಿ ಹೇಳಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles