Wednesday, June 18, 2025

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗಿ ಪೀಡಿತರ ಯೋಗಕ್ಷೇಮ ವಿಚಾರಿಸಿದ ಗೋಪಾಲ ಪೂಜಾರಿ

ಕುಂದಾಪುರ: ಡೆಂಘಿ ಪೀಡಿತರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ದೊರೆಯುತ್ತಿದ್ದರೂ ಖಾಸಗಿ ಆಸ್ಪತ್ರೆಯಲ್ಲಿ ಪೀಡಿತರು ಹಣ ಕಟ್ಟಬೇಕಾಗುತ್ತದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಒತ್ತಾಯಿಸಿದ್ದಾರೆ.
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಡೆಂಘಿ ಪೀಡಿತರ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದಾಪುರ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೊ ಅವರು ಈವರೆಗೆ ಆಸ್ಪತ್ರೆಗೆ ದಾಖಲಾದ ಡೆಂಘಿ ಪೀಡಿತರ ಹಾಗೂ ಬಿಡುಗಡೆ ಆದವರ ಮಾಹಿತಿ ನೀಡಿ, ಡೆಂಘಿ ಬಾಧಿತರ ಚಿಕಿತ್ಸೆಗೆ ಮಾಡಿಕೊಂಡ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ಆಸ್ಪತ್ರೆಯ ಸೌಕರ್ಯಗಳ ಬಗ್ಗೆ ಮಾಜಿ ಶಾಸಕರು ಈ ಸಂದರ್ಭ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗಭೂಷಣ ಉಡುಪ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಡೆಂಘಿ ಕೊರೊನಾದಂತೆ ಹರಡಲು ಬಿಡದೆ ನಿಯಂತ್ರಣಕ್ಕೆ ಎಲ್ಲಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles