ಬೆಳ್ತಂಗಡಿ: ದನವೊಂದು ಅಂಗಳದಲ್ಲಿದ್ದ ಸುಮಾರು 25 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬೆಳ್ತಂಗಡಿ ಲಾಯಿಲ ಗ್ರಾಮದ ಕುಂಡಡ್ಕ ಎಂಬಲ್ಲಿ ಶನಿವಾರ ನಡೆದಿದೆ.
ದನ ಬಾವಿಗೆ ಬಿದ್ದ ತಕ್ಷಣವೇ ಮನೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬಾವಿಯ ನೀರನ್ನು ಪಂಪ್ ಮೂಲಕ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ದನವನ್ನು ಬಾವಿಯಿಂದ ಎತ್ತಿ ರಕ್ಷಿಸಿದ್ದಾರೆ. ಬಾವಿಯಲ್ಲಿ ನೀರು ಇದ್ದ ಕಾರಣ ದನಕ್ಕೆ ಯಾವುದೇ ರೀತಿಯ ಗಾಯಗಳಾಗಲಿಲ್ಲ.