ಉಡುಪಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ಅತ್ಯುತ್ತಮ ಸಾಧನೆಗೈದು ಉಡುಪಿಯ ಕೀರ್ತಿ ಹೆಚ್ಚಿಸಿದ ಇಬ್ಬರು ವಿದ್ಯಾರ್ಥಿಗಳ ಮನೆಗೆ ಶನಿವಾರ ಶಾಸಕ ರಘುಪತಿ ಭಟ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ವಿದ್ಯಾರ್ಥಿಗಳಿಗೆ ಸಿಇಟಿ ಹಾಗೂ ನೀಟ್ ಸೇರಿದಂತೆ ಎರಡು ವರ್ಷದ ವಿದ್ಯಾಭ್ಯಾಸವನ್ನು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಉಚಿತವಾಗಿ ವ್ಯವಸ್ಥೆ ಮಾಡುವುದಾಗಿ ಶಾಸಕರು ಭರವಸೆ ನೀಡಿದರು.
ಮಲ್ಪೆ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಕಲ್ಮಾಡಿಯ ಕಲ್ಲಪ್ಪ ಹಾಗೂ ಲಲಿತ ದಂಪತಿಗಳ ಮಗನಾದ ಪುನೀತ್ ನಾಯ್ಕ್ ಹಾಗೂ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಂಜಿಬೆಟ್ಟು ನಿವಾಸಿ ಪ್ರಕಾಶ್ ದೇವಾಡಿಗ ಹಾಗೂ ವಸಂತಿ ದಂಪತಿಗಳ ಮಗಳಾದ ಗಾಯತ್ರಿ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಸ್ಥಳೀಯ ನಗರಸಭಾ ಸದಸ್ಯರಾದ ಸುಂದರ್ ಕಲ್ಮಾಡಿ, ಗಿರೀಶ್ ಅಂಚನ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ವಿನಯ್ ಕಲ್ಮಾಡಿ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿಯಲ್ಲಿ ಸಾಧನೆಗೈದ ಉಡುಪಿಯ ಇಬ್ಬರು ವಿದ್ಯಾರ್ಥಿಗಳಿಗೆ ಸಿಇಟಿ-ನೀಟ್ ಉಚಿತ ವಿದ್ಯಾಭ್ಯಾಸ: ಶಾಸಕ ರಘುಪತಿ ಭಟ್
Subscribe
Login
0 Comments