Tuesday, June 17, 2025

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ: ಮೃತದೇಹ ಮೇಲಕ್ಕೆತ್ತಿದ ಸ್ಥಳೀಯ ಈಜುಪಟು

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಸಮೀಪ ನೇತ್ರಾವತಿ ನದಿಗೆ ಹಾರಿ ವೃದ್ದೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೂಡಿನಬಳಿ ಹಳೆ ನೇತ್ರಾವತಿ ಸೇತುವೆ ಸಮೀಪ ಈ ಘಟನೆ ನಡೆದಿದ್ದು, ಸ್ಥಳೀಯ ಈಜುಪಟು ಯುವಕರು ತಕ್ಷಣ ಕಾರ್ಯಪ್ರವೃತ್ತರಾಗಿ ವೃದ್ಧ ಮಹಿಳೆಯನ್ನು ನೀರಿನಿಂದ ಮೇಲಕ್ಕೆತ್ತಿದ್ದರಾದರೂ ಅದಾಗಲೇ ಮಹಿಳೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಮೃತ ಮಹಿಳೆ ಬಂಟ್ವಾಳ ದೇವಸ್ಥಾನದ ಸಮೀಪದ ನಿವಾಸಿ ಎನ್ನಲಾಗಿದ್ದು, ಸುಮಾರು 60 ವರ್ಷ ಪ್ರಾಯದವರಾಗಿದ್ದಾರೆ. ಯಾವ ಕಾರಣಕ್ಕೆ ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಗೂಡಿನಬಳಿ ಈಜುಪಟು ತಜ್ಞ ಮುಹಮ್ಮದ್ ಮಮ್ಮು ನೇತೃತ್ವದ ಯುವಕರಾದ ಇರ್ಷಾದ್, ಯಾಸೀರ್, ಮುಝೈನ್(ಮುಝೀ), ಸತ್ಯ, ಇಬ್ರಾಹಿಂ, ಹಾರಿಸ್ ಅವರ ತಂಡ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತುವಲ್ಲಿ ಸಹಕರಿಸಿದರು ಎನ್ನಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles