Tuesday, June 17, 2025

ಉಡುಪಿಯಲ್ಲಿ ಬೆಂಗಳೂರಿನ ಜೋಡಿ ಆತ್ಮಹತ್ಯೆ ಪ್ರಕರಣ: ಮಂಗಳೂರಿನ ಬೀಚ್‌ನಲ್ಲಿ ಸುತ್ತಾಡಿದ್ದ ಜೋಡಿ

ಮಂದಾರ್ತಿ: ಮಂದಾರ್ತಿ ಹೆಗ್ಗಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿ ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಬೆಂಗಳೂರು ಆರ್.ಟಿ.ನಗರ ಮೂಲದ ಯಶವಂತ್ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಈ ಜೋಡಿ ನಿನ್ನೆ ಮಂಗಳೂರಿನ ಮೀಲಾಗ್ರೀಸ್ ಬಳಿ ಇರುವ ಕಾರ್ ಹಬ್‌ನಿಂದ ಕಾರನ್ನು ಬಾಡಿಗೆ ಪಡೆದುಕೊಂಡು ಮಂಗಳೂರಿನ ಬೀಚ್‌ನಲ್ಲಿ ಸುತ್ತಾಡಿದ್ದರು. ನಿನ್ನೆ ಬೆಳಿಗ್ಗೆ ಬೈಕ್ ನಲ್ಲಿ ಬಂದು ಕಾರು ಬಾಡಿಗೆ ಪಡೆದಿದ್ದರು ಎನ್ನಲಾಗಿದ್ದು, ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು, ಕಳೆದ ಮೂರು ದಿನಗಳ ಹಿಂದೆ ಇವರ ವಿರುದ್ಧ ಬೆಂಗಳೂರಿನಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಮುಂಜಾನೆ 3.30ರ ಸುಮಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳಿಯರು ವಿದ್ಯುತ್ ಅವಘಡಡ ಆಗಿರಬಹುದು ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪ್ರತ್ಯಕ್ಷವಾಗಿದ್ದು, ಅದರಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles