ಉಡುಪಿ:ಬೆಂಗಳೂರಿನ ಜೋಡಿ ಉಡುಪಿಯಲ್ಲಿ ಬೆಂಕಿಹಚ್ಚಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ನಡೆದ ಬೆನ್ನಲ್ಲೇ ಶವದ ಅಂತ್ಯಸಂಸ್ಕಾರವನ್ನು ಎರಡು ಕುಟುಂಬಸ್ಥರು ಉಡುಪಿಯಲ್ಲಿಯೇ ಅಂತ್ಯಸಂಸ್ಕಾರವನ್ನು ನೆರವೇರಿಸಿದರು.
ಮಂದಾರ್ತಿ ಹೆಗ್ಗಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿತ್ತು. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಆರಂಭಗೊಳಿಸಿ ಮೃತದೇಹವನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದು, ವಿಷಯವನ್ನು ಇಬ್ಬರ ಕುಟುಂಬಸ್ಥರಿಗೆ ತಿಳಿಸಲಾಗಿದೆ. ವಿಷಯ ತಿಳಿದು ಇಬ್ಬರ ಕುಟುಂಬಸ್ಥರು ಭಾನುವಾರ ತಡರಾತ್ರಿ ಆಗಮಿಸಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದ್ದ ಶವ ನೋಡಿ ಕಂಗಾಲಾಗಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆದಿದ್ದು, ಆ ಬೆನ್ನಲ್ಲೇ ಇಂದ್ರಾಳಿಯ ಸ್ಮಶಾನದಲ್ಲಿ ರಾತ್ರಿ ಒಂದು ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಬಳಿಕ ಕುಟುಂಬಸ್ಥರು ಅಂತಿಮ ಸಂಸ್ಕಾರದ ಬೂದಿಯನ್ನು ಕೊಂಡೊಯ್ದಿದ್ದಾರೆ.
ಬೆಂಗಳೂರಿನ ಜೋಡಿ ಬೆಂಕಿಹಚ್ಚಿ ಆತ್ಮಹತ್ಯೆ ಪ್ರಕರಣ:ಉಡುಪಿಯಲ್ಲೇ ಅಂತಿಮ ಸಂಸ್ಕಾರ ನೆರವೇರಿಸಿದ ಕುಟುಂಬಸ್ಥರು
Subscribe
Login
0 Comments