Monday, June 9, 2025

ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ 40% ಕಮಿಷನ್ ವಿರುದ್ಧ ‘ವಿಭಿನ್ನ ಚೀಲ ಚಳವಳಿ’

ಬೆಳ್ತಂಗಡಿ: 40% ಕಮಿಷನ್ ದಂಧೆ ವಿರುದ್ಧ ಬೆಳ್ತಂಗಡಿಯ ಯುವ ಕಾಂಗ್ರೆಸ್ ‘ವಿಭಿನ್ನ ಚೀಲ ಚಳವಳಿ’ಯನ್ನು ಹಮ್ಮಿಕೊಂಡಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಚೀಲದಲ್ಲಿ ಹಣ ಶೇಖರಣೆ ಮಾಡಿ ಹಂಚುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಕೂಡ ಯುವ ಕಾಂಗ್ರೆಸ್ ಮಾಡಿದೆ.

ಯುವ ಕಾಂಗ್ರೆಸ್ ಪಡೆ ಬೆಳ್ತಂಗಡಿ ನಗರದಾದ್ಯಂತ ಶಾಸಕರು ತಾಲೂಕಿನಲ್ಲಿ ನಡೆಸುತ್ತಿರುವ ಭ್ರಷ್ಟಾಚಾರವನ್ನು ಸಾರ್ವಜನಿಕರ ಗಮನ ಸೆಳೆಯುವ ಉದ್ದೇಶದಿಂದ ಪಾಸ್ಟಿಕ್ ಚೀಲದ ಮೇಲೆ “ಚೀಲ ಚಳುವಳಿ 40% ಬೆಳ್ತಂಗಡಿ” ಎಂದು ಬರೆದು ರಸ್ತೆಯ ಇಕ್ಕೆಲಗಳಲ್ಲಿ ಹಾಕಿದ್ದರು. ಇದನ್ನು ಗಮನಿಸಿದ ಶಾಸಕರ ಹಿಂಬಾಲಕರು ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅದನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆ ನಮ್ಮ ಪ್ರತಿಭಟನೆಯ ಭಾಗವಾಗಿ ಅಳವಡಿಸಲಾಗಿದ್ದ ಚೀಲವನ್ನು ಬಿಜೆಪಿ ನೇತೃತ್ವದ ಪಟ್ಟಣ ಪಂಚಾಯತ್ ಆಡಳಿತ ಕಿತ್ತೆಸೆಯುವ ಮೂಲಕ ಭೃಷ್ಟಾಚಾರ ವಿರುದ್ಧದ ಹೋರಾಟವನ್ನು ಹತ್ತಿಕ್ಕಿದೆ ಎಂದು ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles