Monday, June 9, 2025

ಮಳಲಿಯ ಮಸೀದಿ ಸ್ಥಳದಲ್ಲಿ ದೇವಸ್ಥಾನ ಇದ್ದಿದ್ದು ನಿಜ: ಕೇರಳದ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ದೇವಸ್ಥಾನ ಪತ್ತೆಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಇಂದು ತಾಂಬೂಲ ಪ್ರಶ್ನೆಗೆ ಮುಂದಾಗಿತ್ತು. . ಈ ವೇಳೆ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ.
ಇಂದು ಮಳಲಿ ಮಸೀದಿಯ ಸಮೀಪದ ರಾಮಾಂಜನೇಯ ಭಜನೆ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಹಾಕಲಾಗಿದ್ದು, ಈ ವೇಳೆ ಮಸೀದಿ ಇರುವು ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ. ಸಾಮಾನ್ಯ ತಾಂಬೂಲ ಪ್ರಶ್ನೆ ಪೂರ್ಣವಾಗಿ ಚೈತ್ಯನ್ಯದಿಂದ ಕೂಡಿದೆ. ನಾವು ಪ್ರಾರ್ಥಿಸಿದ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎಂದು ತಿಳಿಯುತ್ತದೆ ಎಂದು ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಹೇಳಿದ್ದಾರೆ.
ಇದು ದೈವ ಸಾನಿಧ್ಯ ಇದ್ದಂತಹ ಸ್ಥಳ, ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ಉತ್ತರ ಬಂದಿದೆ. ಇಲ್ಲಿ ಗುರುಪೀಠ ಇತ್ತು. ಯಾವುದೋ ಒಂದು ಕಾಲದಲ್ಲಿ ದೇವಸ್ಥಾನ ಇತ್ತೆಂದು ತಿಳಿಯುತ್ತಿದೆ. ಈಗ ಮೇಲೆದ್ದು ಬಂದಿದೆ. ವಿವಾದದಿಂದ ದೇವಸ್ಥಾನ ನಾಶವಾಗಿದೆಯೆಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಇದೀಗ ಇಲ್ಲಿ ದೇವಸ್ಥಾನ ಇರುವುದು ತಾಂಬೂಲ ಪ್ರಶ್ನೆಯಲ್ಲಿ ತಿಳಿದು ಬಂದಿದೆ. ಹಿಂದೂ ಸಂಘಟನೆಯು ಈ ಹಿಂದೆ ಹೇಳಿರುವಂತೆ, ಈ ದೇವಸ್ಥಾನದ ಹೋರಾಟಕ್ಕೆ ಸಮಿತಿಗಳನ್ನು ರಚನೆ ಮಾಡಲು ತಿರ್ಮಾನಿಸಿತ್ತು. ಮಸೀದಿ ಕಮಿಟಿಯ ಇಚ್ಛಿಸಿದಲ್ಲಿ ಮಾತುಕತೆ ಮೂಲಕ ರಾಜಿಗೆ ಸಿದ್ಧವಾಗಿರುವುದಾಗಿ ತಿಳಿಸಿರುವ ಹಿಂದೂ ಸಂಘಟನೆ, ರಾಜಿ ಒಪ್ಪದಿದ್ದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿತ್ತು..

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles