ಮಂಗಳೂರು: ಮಂಗಳೂರು ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರವಾಗಿ ಸ್ಟೂಡೆಂಟ್ ಯೂನಿಯನ್ನ ಅಧ್ಯಕ್ಷ ಹಿಜಾಬ್ ಧಾರಿ ವಿದ್ಯಾರ್ಥಿನಿಯರ ಬಗ್ಗೆ ಮೃದು ಧೋರಣೆ ತೋರಿದ ಆರೋಪವನ್ನು ಮಾಡಲಾಗಿತ್ತು. ಈ ಹಿನ್ನೆಲೆ ಎಬಿವಿಪಿ ಬೆಂಬಲಿತ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದ ವಿನ್ಯಾಸ್ ಆಚಾರ್ಯ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ವಿದ್ಯಾರ್ಥಿಗಳ ಒತ್ತಾಯಿಸಲಾಗಿತ್ತು. ಈ ಬಗ್ಗೆ ಸ್ಟೂಡೆಂಟ್ ಯೂನಿಯನ್ ಅಧ್ಯಕ್ಷ ವಿನ್ಯಾಸ್ ಆಚಾರ್ಯ ಪ್ರತಿಕ್ರಿಯಿಸಿದ್ದು, ನಾನು ಯಾರ ಪರವಾಗಿಯು ಇಲ್ಲ. ವಿದ್ಯಾರ್ಥಿ ನಾಯಕನಾಗಿರುವ ಕಾರಣ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಅಸಾಧ್ಯ ಎಂದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ಏಕಾಏಕಿ ಹಿಜಾಬ್ ತೆಗೆಯುವಂತೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದೆ. ಇದರಿಂದ ಕೆಲ ಸ್ಟೂಡೆಂಟ್ ರೆಪ್ರೆಸೆಂಟೇಟಿವ್ಸ್ ಗೆ ಬೇಜಾರು ಆಗಿದೆ. ನಾನು ರಾಜೀನಾಮೆ ಕೊಡುತ್ತೇನೆ. ಎಂದು ಬೇಸರದಲ್ಲಿ ನುಡಿದ ವಿನ್ಯಾಸ್ ಆಚಾರ್ಯ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ನಾನು ಹಿಜಾಬ್ ವಿರುದ್ದವೇ ಮಾತನಾಡಿದ್ದೆ. ನಾನು ಪ್ರಿನ್ಸಿಪಾಲ್ ಮೇಲೆ ಒತ್ತಡ ಹೇರಿಲ್ಲ ಎಂದು ಆರೋಪಿಸಲಾಗಿದೆ. ಆದರೆ, ನಾನು ಸಭೆಯಲ್ಲಿ ನನ್ನದೇ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಅದು ಕೆಲವರಿಗೆ ಬೇಸರ ಉಂಟು ಮಾಡಿದ್ಯಂತೆ. ನಿನ್ನೆ ನನ್ನ ವಿರುದ್ಧವೇ ಪ್ರತಿಭಟನೆ ನಡೆಸಲಾಗಿತ್ತು. ನಾನು ಬೇಸರಗೊಂಡು ನಿನ್ನೆ ನಾನು ಕಾಲೇಜಿಗೆ ಬಂದಿರಲಿಲ್ಲ. ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದರು. ಯೂನಿಯನ್ ಮೀಟಿಂಗ್ನಲ್ಲಿ ನಾನು ನನ್ನದೇ ಆದಂತಹ ಅಭಿಪ್ರಾಯ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.
ಸ್ಟೂಡೆಂಟ್ ಯೂನಿಯನ್ ಅಧ್ಯಕ್ಷ ಸ್ಥಾನಕ್ಕೆ ವಿನ್ಯಾಸ್ ಆಚಾರ್ಯ ರಾಜೀನಾಮೆ ಘೋಷಣೆ..!
Subscribe
Login
0 Comments