Monday, June 9, 2025

ಮಳಲಿ ಮಸೀದಿ ಬಿಟ್ಟುಕೊಡುತ್ತಾರೆ ಅನ್ನುವ ಕನಸು ಕಾಣಬೇಡಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮಂಗಳೂರು: ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಪತ್ತೆ ವಿಚಾರವಾಗಿ ತಾಂಬೂಲ ಪ್ರಶ್ನೆ ಇಟ್ಟಾಗ ದೇವರ ಸಾನಿಧ್ಯ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆ ಆ ಸ್ಥಳವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಹಿಂದೂ ಸಂಘಟನೆ ಮನವಿಯನ್ನು ಮಾಡಿತ್ತು. ಇದಕ್ಕೆ ಮಂಗಳೂರಿನ ಎಸ್‌ಡಿಪಿಐ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡುವುದಿಲ್ಲ. ಮಸೀದಿ ಬಿಟ್ಟುಕೊಡುತ್ತಾರೆ ಅನ್ನುವ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ಡಿಕೆಶಿ ಮಳಲಿ ಮಸೀದಿ ವಿಚಾರದಲ್ಲಿ ಮಾತಾಡದಂತೆ ತಮ್ಮ ಶಾಸಕರಿಗೆ ಹೇಳಿದ್ದಾರೆ. ಕಾಂಗ್ರೆಸ್ ಮುಸ್ಲಿಮರ ಪರ ಅಲ್ಲ ಅನ್ನೋದನ್ನ ತಿಳಿದುಕೊಳ್ಳಿ ಎಂದು ಹೇಳಿದ್ದಾರೆ.
ಎಸ್‌ಡಿಪಿಐ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ್ದು, ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991′ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು ಎನ್ನುವ ಆ್ಯಕ್ಟ್ ಅನ್ನು ಪೊಲೀಸರು ಓದಿಲ್ವೇ?. 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯವನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles