ಕಾರ್ಕಳ: ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷರಾಗಿರುವಂಥ ಸದಾಶಿವ ದೇವಾಡಿಗ, ಸುಬೀತ್ NR, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿಯಿದ್ದರು.