Saturday, June 7, 2025

ಹನಿಟ್ರ್ಯಾಪ್ ಬಲೆಗೆ ಬಿದ್ದು ದೇಶದ್ರೋಹದ ಕೆಲಸ; ಡಿಆರ್‌ಡಿಒ ಸೇವೆಯಿಂದ ಹಿರಿಯ ವಿಜ್ಞಾನಿ ಅಮಾನತು

ನವದೆಹಲಿ: ವರ್ಚುಯಲ್ ನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದು, ಶಂಕಿತ ಪಾಕಿಸ್ತಾನಿ ಗೂಢಚಾರರಿಗೆ ಮಾಹಿತಿ ಸೋರಿಕೆ ಮಾಡಿರುವುದು ತನಿಖೆಯಿಂದ ತಿಳಿದುಬಂದ ನಂತರ ಹಿರಿಯ ವಿಜ್ಞಾನಿ, ಪ್ರಯೋಗಾಲಯದ ನಿರ್ದೇಶಕ ಪ್ರದೀಪ್ ಕುರುಲ್ಕರ್ ಅವರನ್ನು ಡಿಆರ್ ಡಿಒ ಸೇವೆಯಿಂದ ಅಮಾನತುಪಡಿಸಿದೆ.

ಈ ಹಿಂದೆ ದೇಶದ ಗೌಪ್ಯ ಮಾಹಿತಿಗಳನ್ನು ಆ್ಯಪ್ ಮೂಲಕ ವಿದೇಶಿ ಏಜೆಂಟ್ ಗಳಿಗೆ ಕಳುಹಿಸಿದ್ದಕ್ಕಾಗಿ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿ, ತನಿಖೆಯಲ್ಲಿ ಅವರು ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿರುವುದು ಕಂಡುಬಂದ ನಂತರ ವಿಜ್ಞಾನಿಯನ್ನು ಪ್ರಯೋಗಾಲಯದ ನಿರ್ದೇಶಕ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಡಿಆರ್‌ಡಿಒ ಹಿರಿಯ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.ಆನ್‌ಲೈನ್‌ನಲ್ಲಿ ಅವರ ಚಟುವಟಿಕೆಗಳ ಬಗ್ಗೆ ಇತರ ಏಜೆನ್ಸಿಗಳಿಂದ ಮಾಹಿತಿ ಪಡೆದ ನಂತರ ಸಂಸ್ಥೆ ಪುರುಲ್ಕರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದೆ. ನಾವು ಈಗಾಗಲೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles