ಪರ್ಕಳ: ನಿಯಂತ್ರಣದ ತಪ್ಪಿದ ಕಾರೊಂದು ಚರಂಡಿಗೆ ಬಿದ್ದು ಜಖಂಗೊಂಡ ಘಟನೆ ಉಡುಪಿ ಪರ್ಕಳ ಬಳಿಯ ಕೆಳಪರ್ಕಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಾರು ಉಡುಪಿಯಿಂದ ಮಣಿಪಾಲದ ಕಡೆಗೆ ಹೋಗುತ್ತಿದ್ದು, ಕೆಳಪರ್ಕಳ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಳಪರ್ಕಳ ಭಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುದ್ದು, ಸೂಕ್ತ ದಾರಿದೀಪದ ವ್ಯವಸ್ಥೆ ಹಾಗೂ ನಿಧಾನ ಚಲಿಸಿ ಎಂಬ ನಾಮಫಲಕ ಅಳವಡಿಸುವ ಅಗತ್ಯವಿದೆ ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು ಆಗ್ರಹಿಸಿದ್ದಾರೆ.
ನಿಯಂತ್ರಣ ತಪ್ಪಿದ ಕಾರು ಚರಂಡಿ ಪಾಲು; ಚಾಲಕ ಪಾರು
Subscribe
Login
0 Comments