Sunday, June 8, 2025

ಕೈ-ಕಾಲು ತೊಳೆಯಲು ಹೋದ ಯುವಕನನ್ನು ಎಳೆದೊಯ್ದ ಮೊಸಳೆ

ದಾಂಡೇಲಿ: ಕೈ-ಕಾಲು ತೊಳೆಯಲು ನದಿಗೆ ಇಳಿದಿದ್ದ ಯುವಕನನ್ನು ಮೊಸಳೆ ಎಳೆದೊಯ್ದಿರುವ ಘಟನೆ ದಾಂಡೇಲಿಯ ಕಾಳಿ ನದಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ದಾಂಡೇಲಿಯ ಪಟೇಲ್ ನಗರದ ಹರ್ಷದ್ ಖಾನ್ ರಾಯಚೂರ್(22) ಮೊಸಳೆ ದಾಳಿಗೆ ಬಲಿಯಾದ ಯುವಕ. ಈತ ಪತ್ರಿನಿತ್ಯದಂತೆ ಕೆಲಸ ಮುಗಿಸಿಕೊಂಡು ಕೈ-ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಬಂದಿದ್ದಾನೆ. ಈತ ನೀರಿಗೆ ಕೈ ಹಾಕುತ್ತಿದ್ದಂತೆ ಯುವಕನ ಮೇಲೆ ಮೊಸಳೆ ದಾಳಿಮಾಡಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಆಗಮಿಸಿ ಹರ್ಷದ್ ಖಾನ್ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles