ದಾಂಡೇಲಿ: ಕೈ-ಕಾಲು ತೊಳೆಯಲು ನದಿಗೆ ಇಳಿದಿದ್ದ ಯುವಕನನ್ನು ಮೊಸಳೆ ಎಳೆದೊಯ್ದಿರುವ ಘಟನೆ ದಾಂಡೇಲಿಯ ಕಾಳಿ ನದಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ದಾಂಡೇಲಿಯ ಪಟೇಲ್ ನಗರದ ಹರ್ಷದ್ ಖಾನ್ ರಾಯಚೂರ್(22) ಮೊಸಳೆ ದಾಳಿಗೆ ಬಲಿಯಾದ ಯುವಕ. ಈತ ಪತ್ರಿನಿತ್ಯದಂತೆ ಕೆಲಸ ಮುಗಿಸಿಕೊಂಡು ಕೈ-ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಬಂದಿದ್ದಾನೆ. ಈತ ನೀರಿಗೆ ಕೈ ಹಾಕುತ್ತಿದ್ದಂತೆ ಯುವಕನ ಮೇಲೆ ಮೊಸಳೆ ದಾಳಿಮಾಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಆಗಮಿಸಿ ಹರ್ಷದ್ ಖಾನ್ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.