Sunday, June 8, 2025

ತೋಟದ ಕೆರೆಯ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು

ಸವಣೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34 ವ.) ಎಂದು ಗುರುತಿಸಲಾಗಿದೆ.

ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದವನು ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ದೂರುದಾರ ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಪಿರ್ಯಾದಿದಾರರ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles