ಮಂಗಳೂರು: ನಗರದ ಖಾಸಗಿ ಕಾಲೇಜು ಆವರಣದ ಬಳಿ ತಲ್ವಾರ್ ಹಿಡಿದು ದಾಂದಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲ್ವಾರ್ ಹಿಡಿದು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ವಿಶ್ವಾಸ್(22) ಎಂದು ಗುರುತಿಸಲಾಗಿದೆ. ಬರ್ಕೆ ಠಾಣಾ ಪೊಲೀಸರು ಬಂಧಿತನಿಂದ ತಲ್ವಾರ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಯುವಕರ ತಂಡದ ಸ್ಕೂಟರ್ ಕೇರಳದ ವಿದ್ಯಾರ್ಥಿಗಳಿಗೆ ಗುದ್ದಿದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಯುವಕರ ತಂಡದ ನಡುವೆ ವಾಗ್ವಾದ ನಡೆದಿದೆ. ಇದನ್ನೇ ನೆಪವಾಗಿರಿಸಿ ಯುವಕರ ತಂಡ ತಲ್ವಾರ್ ಹಿಡಿದು ಕಾಲೇಜು ಆವರಣ ಪ್ರವೇಶಿಸಿದ್ದು, ಈ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ನಲ್ಲಿ ಸೆರೆಯಾಗಿದೆ.