Sunday, June 8, 2025

ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಕಂಪನಿಗಳಲ್ಲಿ ಸುಮಾರು 2000 ದಷ್ಟು ಉದ್ಯೋಗ ಲಭ್ಯತೆ

ಉಡುಪಿ: ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಸಂಜೀವಿನಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಉದ್ಯೋಗಮೇಳದಲ್ಲಿ ಜಿಲ್ಲೆಯ ಮತ್ತು ರಾಜ್ಯದ ವಿವಿಧ 20 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು. ಕೋವಿಡ್‌ನಿಂದಾಗಿ ಅನೇಕ ಮಂದಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಹಾಗೂ ಉದ್ಯೋಗ ವಂಚಿತರಾಗಿದ್ದಾರೆ. ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪೆನಿಗಳಲ್ಲಿ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಯ ಕ್ಷೇತ್ರದ ಉದ್ಯೋಗವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಅತೀ ಕಡಿಮೆ ಅವಧಿಯಲ್ಲಿ ಉದ್ಯೋಗ ಮೇಳದಲ್ಲಿ 1558 ಮಂದಿ ಉದ್ಯೋಗಾಕಾಂಕ್ಷಿಗಳು ನೊಂದಾಯಿಸಿಕೊಂಡಿದ್ದಾರೆ. ಸುಮಾರು 2000 ದಷ್ಟು ಉದ್ಯೋಗ ಲಭ್ಯತೆಯು ಇಂದಿನ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ವಿವಿಧ ಕಂಪನಿಗಳಲ್ಲಿ ಇವೆ. ಜಿಲ್ಲಾ ಪಂಚಾಯತ್‌ನ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ವಿವಿಧ ತರಬೇತಿ ಕಾರ್ಯಕ್ರಮಗಳು ಹಾಗೂ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಮೊಬೈಲ್ ಕ್ಯಾಂಟೀನ್, ಚಿಕ್ಕಿ ಘಟಕ ಸ್ಥಾಪನೆಗೆ ಉದ್ಯಮಿಯಾಗು ಎಂಬ ಯೋಜನೆಯಡಿ ನೆರವು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಗದೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್‌ನ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿದರು, ನವ್ಯಾ ವಂದಿಸಿದರು.ಹಾಗೂ ಪ್ರಭಾಕರ ಆಚಾರ್ ನಿರೂಪಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles