ಉಡುಪಿಯ ನಗರಾಭಿವೃದ್ಧಿ ಪ್ರಾದಿಕಾರದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು. ಲಂಚಕ್ಕೆ ಬೇಡಿಕೆ ಇಟ್ಟ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ವಾಣಿಜ್ಯ ಕಾರಣಕ್ಕಾಗಿ ಲೈಸೆನ್ಸ್ ಕೊಡುವ ವಿಚಾರದ ಸಂಬಂಧ ಆರೋಪಿಗಳು ಲಂಚ ಪಡೆಯುತ್ತಿದ್ದರು ಎನ್ನಲಾಗುತ್ತಿದ್ದು, ಈ ಸಂದರ್ಭ ಎಸಿಬಿ ಎಸ್.ಪಿ ಸೈಮನ್, ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಎಸಿಬಿ ಎಸ್ಐ ಸತೀಶ್, ರಫೀಕ್ ಅವರ ಎಸಿಬಿ ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ನಗರಾಭಿವೃದ್ಧಿ ಪ್ರಕಾರದ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರದ ಅಧಿಕಾರಿಗಳಾದ ನಯೀಮಾ ಸಯೀದ್, ಹಾಗೂ ಪ್ರಸಾದ್ ಅವರನ್ನು ಎಸಿಬಿ ತನ್ನ ವಶಕ್ಕೆ ಪಡೆದುಕೊಂಡಿದ್ದು, ಇದೇ ವೇಳೆ ಲಂಚ ಪಡೆದಿದ್ದ 2.50ಲಕ್ಷ ರೂಪಾಯಿಯನ್ನೂ ಕೂಡ ಎಸಿಬಿ ತನ್ನ ವಶಕ್ಕೆ ಪಡೆದುಕೊಂಡಿದೆ.
ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲಂಚ:ಎಸಿಬಿ ದಾಳಿ:ಮೂವರು ಅರೆಸ್ಟ್
Subscribe
Login
0 Comments