ಡೆಹ್ರಾಡೂನ್: ಉತ್ತರಾಖಂಡದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಸಂದರ್ಭ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆಂದು ಘೋಷಿಸಲಾಗಿದೆ.
ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರು ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗುವಂತೆ ಮನವಿ ಮಾಡಲು ನಟ ಅಕ್ಷಯ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಬ್ರಾಂಡ್ ಅಂಬಾಸಿಡರ್ ಆಗಲು ಅಕ್ಷಯ್ ಕುಮಾರ್ ಒಪ್ಪಿಗೆ ನೀಡಿದ್ದು, ಅವರು ಒಪ್ಪಿರುವುದು ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ನಟ ಅಕ್ಷಯ್ ಕುಮಾರ್ ಅವರು ಯಾವುದೇ ಹಣವನ್ನು ಪಡೆಯದೆ ಉಚಿತವಾಗಿ 2017 ರಲ್ಲಿ ಉತ್ತರಾಖಂಡ ರಾಜ್ಯದ ಸ್ವಚ್ಛ ಭಾರತ ಅಭಿಯಾನದ ಬ್ರಾಂಡ್ ಅಂಬಾಸಿಡರ್ ಆಗಿದ್ದರು.