Sunday, June 8, 2025

ಆಳ್ವಾಸ್: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿ.ವಿ.ಯ ಅಂತರ್ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ.ರವಿಶಂಕರ್ ರಾವ್ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ತಮ್ಮ ಸೋಲನ್ನು ಗೆಲುವಿನ ಮೆಟ್ಟಿಲು ಎಂದು ಭಾವಿಸಿ ತಮ್ಮನ್ನು ತಾವು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕರ್ತವ್ಯ ಪ್ರಜ್ಞೆ ಹೊಂದಿರಬೇಕು ಹೆತ್ತವರ ಪರಿಶ್ರಮಕ್ಕೆ ನ್ಯಾಯ ಒದಗಿಸುವುದು ವಿದ್ಯಾರ್ಥಿಗಳ ಜವಾಬ್ದಾರಿ. ಗೆಲುವು ಸಾಧಿಸಲು ಯಾವುದೇ ಅಡ್ಡದಾರಿಗಳಿಲ್ಲ. ಸ್ವಪ್ರಯತ್ನದಿಂದ ಮಾತ್ರ ಉನ್ನತಿ ಹೊಂದಲು ಸಾಧ್ಯ. ಕೇವಲ ಅಂಕ ಗಳಿಸುವುದು ವಿದ್ಯಾರ್ಥಿಗಳ ಧ್ಯೇಯವಾಗಿರಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಮಹಮ್ಮದ್ ಸದಾಕತ್ ವಹಿಸಿದ್ದರು.

ಆಳ್ವಾಸ್ ಸಾಹಿತ್ಯ ಸಂಘದ ಸಂಚಾಲಕಿ ಡಾ.ದಿವ್ಯಶ್ರೀ ಡೆಂಬಳ ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕಿ ಡಾ. ಸುಲತಾ ವಿದ್ಯಾಧರ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಉಪನ್ಯಾಸಕಿ ಶಶಿಕಲಾ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles