ಮಂಗಳೂರು: ಯುವಕನೊಬ್ಬನ ಮೇಲೆ ನಾಲ್ಕರಿಂದ ಐದು ಜನರು ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಕೃಷ್ಣಾಪುರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಮೊಹಮ್ಮದ್ ಅನಾಸ್ ಎಂದು ಗುರುತಿಸಲಾಗಿದೆ. ಹಾಗೂ ಹಲ್ಲೆ ಮಾಡಿದ ಆರೋಪಿಗಳನ್ನು ಚಾರು, ರವೂಫ್, ಅಕ್ಕಿ ಮುಸ್ತಫಾ ಮತ್ತು ಮತ್ತೊಬ್ಬ ಹಲ್ಲೆ ನಡೆಸಿದ್ದಾರೆ ಎಂದು ಗುರುತಿಸಲಾಗಿದೆ.
ಹಲ್ಲೆಗೊಳಗಾದ ವ್ಯಕ್ತಿ ಅನಾಸ್ ಅವರು ಚಾರು ಹಾಗೂ ರವೂಫ್ ಅವರು ವಾಸ ಮಾಡುತ್ತಿದ್ದ ಬಾಡಿಗೆ ಮನೆ ಖಾಲಿ ಮಾಡಿಸುವಲ್ಲಿ ಮಧ್ಯಸ್ಥಿಕೆ ವಹಿಸಿರುವ ಸೇಡಿಗೆ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
ಅನಾಸ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ(ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.