Sunday, June 8, 2025

ಮನೆ ಖಾಲಿ ಮಾಡಿಸಲು ಮಧ್ಯಸ್ಥಿಕೆ ವಹಿಸಿದ ವ್ಯಕ್ತಿ ಮೇಲೆ ಹಲ್ಲೆ

ಮಂಗಳೂರು: ಯುವಕನೊಬ್ಬನ ಮೇಲೆ ನಾಲ್ಕರಿಂದ ಐದು ಜನರು ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಕೃಷ್ಣಾಪುರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಮೊಹಮ್ಮದ್ ಅನಾಸ್ ಎಂದು ಗುರುತಿಸಲಾಗಿದೆ. ಹಾಗೂ ಹಲ್ಲೆ ಮಾಡಿದ ಆರೋಪಿಗಳನ್ನು ಚಾರು, ರವೂಫ್, ಅಕ್ಕಿ ಮುಸ್ತಫಾ ಮತ್ತು ಮತ್ತೊಬ್ಬ ಹಲ್ಲೆ ನಡೆಸಿದ್ದಾರೆ ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅನಾಸ್ ಅವರು ಚಾರು ಹಾಗೂ ರವೂಫ್ ಅವರು ವಾಸ ಮಾಡುತ್ತಿದ್ದ ಬಾಡಿಗೆ ಮನೆ ಖಾಲಿ ಮಾಡಿಸುವಲ್ಲಿ ಮಧ್ಯಸ್ಥಿಕೆ ವಹಿಸಿರುವ ಸೇಡಿಗೆ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಅನಾಸ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ(ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles