Sunday, June 8, 2025

ಅಸೋಡು ಶ್ರೀ ಬೆಂಕಿಕಾನ್ ನಂದಿಕೇಶ್ವರ ದೇವಸ್ಥಾನ ಜಾತ್ರೆ; ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಮನವಿ

ಕುಂದಾಪುರ: ತಾಲೂಕಿನ ಅಸೋಡು ಗ್ರಾಮದ ಶ್ರೀ ಬೆಂಕಿಕಾನ್ ನಂದಿಕೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಮುಸ್ಲಿಮರಿಗೆ ಮತ್ತು ಹಿಂದೂಯೇತರರಿಗೆ ಅಂಗಡಿ ಹಾಕಲು ಅವಕಾಶ ನೀಡಬಾರದೆಂದು ದೇವಸ್ಥಾನದ ಆಡಳಿತ ಮಂಡಳಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಅಸೋಡು ಗ್ರಾಮಸ್ಥರು ಹಾಗೂ ಹಿಂದೂ ಸಂಘಟನೆಯ ಪ್ರಮುಖರು ಅಸೋಡು ದೇವಸ್ಥಾನದ ಮುಖ್ಯಸ್ಥ ಅಜಿತ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಹಿಂದೂ ದೇವರಿಗೆ ಅಪಮಾನ ಮಾಡುವವರಿಗೆ ಹಿಂದೂಗಳ ದೇವಸ್ಥಾನದ ಜಾತ್ರೆಗಳಲ್ಲಿ ಅವಕಾಶ ನೀಡುವುದು ಸರಿಯಲ್ಲ. ಅವರಾಗಿಯೇ ಕ್ರಿಯೆ ಆರಂಭಿಸಿದ್ದು ಅದಕ್ಕೆ ಇದು ನಮ್ಮ ಪ್ರತಿಕ್ರಿಯೆ ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಆಕ್ರೋಷ ವ್ಯಕ್ತಪಡಿಸಿದರು.

ಈ ಸಂದರ್ಭ ಹಿಂದೂ ಸಂಘಟನೆ ಪ್ರಮುಖರಾದ ಪ್ರದೀಪ್ ಮಾರ್ಕೋಡು, ಮಾರುತಿ ಕೋಟೇಶ್ವರ, ಅಶೋಕ್ ಶೇರಿಗಾರ್ ಅಸೋಡು, ಶಶಿ ಕಾಳಾವರ, ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles