ಕುಂದಾಪುರ: ಬೈಕ್ನಲ್ಲಿ ಬಂದ ಅಪರಿಚಿತನೋರ್ವ ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಿಲಕ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಕುಂದಾಪುರದ ಕಾಳಾವರ ಗ್ರಾಮದ ನಡುಬೆಟ್ಟು ಎಂಬಲ್ಲಿ ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದು ಪದ್ದಮ್ಮ ಶೆಟ್ಟಿ(72) ಎಂಬುವವರು ಕುತ್ತಿಗೆಯಲ್ಲಿದ್ದ 2 ಫವನ್ ತೂಕದ ಚಿನ್ನದ ಚೈನ್ ಕದ್ದು ಪರಾರಿಯಾಗಿದ್ದ. ಇನ್ನು ಪೊಲೀಸರು ಆರೋಪಿಯಿಂದ ಕದ್ದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ನನ್ನು ವಶಕ್ಕೆ ಪಡೆದಿದ್ದಾರೆ.