ಕುಂದಾಪುರ: ಯಾದಗಿರಿಯ ಗುರಮಿಠಕಲ್ ತಾಲ್ಲೂಕಿನ ಮಾದ್ವಾರ ಗ್ರಾಮದ ವಿದ್ಯಾರ್ಥಿಗಳಾದ ಇಬ್ಬರು ಅನಾಥ ಮಕ್ಕಳನ್ನು ಶೈಕ್ಷಣಿಕ ವಿಚಾರದಲ್ಲಿ ಕರ್ನಾಟಕ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣಕುಮಾರ ಕಲ್ಗದ್ದೆ ಅವರು ಮಂಗಳವಾರ ದತ್ತು ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ಚಿಕ್ಕವರಾಗಿದ್ದಾಗಲೇ ಪೋಷಕರನ್ನು ಕಳೆದುಕೊಂಡು ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿದ ಅರುಣಕುಮಾರ ಕಲ್ಗದ್ದೆ, ಈ ಇಬ್ಬರು ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸಕ್ಕೆ ತಗುಲುವ ವೆಚ್ಚವನ್ನು ಭರಿಸುವುದಾಗಿ ಹಾಗೂ ಈ ಇಬ್ಬರನ್ನು ಅವರ ವಿದ್ಯಾಭ್ಯಾಸ ಪೂರ್ಣಗೊಳ್ಳುವವರೆಗೂ ಶೈಕ್ಷಣಿಕವಾಗಿ ದತ್ತು ಪಡೆಯುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭ ವಿಶ್ವಮಾನವ ಫೌಂಡೇಶನ್ ಸಂಸ್ಥಾಪಕಿ ಚಂದ್ರಾವತಿ ಅವರು ಈ ಇಬ್ಬರು ವಿದ್ಯಾರ್ಥಿಗಳ ಯೋಗ ಕ್ಷೇಮವನ್ನು ವಿಶ್ವಮಾನವ ಫೌಂಡೇಶನ್ ನೋಡಿಕೊಳ್ಳುತ್ತದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ವ್ಯವಸ್ಥಾಪಕ ಪ್ರಕಾಶ ಮೊಗವೀರ, ಅಶ್ವಿತ್ ಪೂಜಾರಿ ಉಪ್ಪಳ, ಶಂಕರ ಕಂದಕೂರ, ಶ್ರೀನಿವಾಸ ಕೇಶ್ವಾರ, ಶಿವಶಂಕರ ಯಲಸತ್ತಿ, ಜಲ್ಲಪ್ಪ ಚಿಂತನಹಳ್ಳಿ, ಪ್ರಭುಲಿಂಗ ಗೊಂದೆಡಗಿ, ಆಂಜನೇಯ ಕಟ್ಟಿಮನಿ ರಾಂಪೂರ ಉಪಸ್ಥಿತರಿದ್ದರು.