Sunday, June 8, 2025

ಅನಾಥ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದ ಅರುಣಕುಮಾರ ಕಲ್ಗದ್ದೆ

ಕುಂದಾಪುರ: ಯಾದಗಿರಿಯ ಗುರಮಿಠಕಲ್ ತಾಲ್ಲೂಕಿನ ಮಾದ್ವಾರ ಗ್ರಾಮದ ವಿದ್ಯಾರ್ಥಿಗಳಾದ ಇಬ್ಬರು ಅನಾಥ ಮಕ್ಕಳನ್ನು ಶೈಕ್ಷಣಿಕ ವಿಚಾರದಲ್ಲಿ ಕರ್ನಾಟಕ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣಕುಮಾರ ಕಲ್ಗದ್ದೆ ಅವರು ಮಂಗಳವಾರ ದತ್ತು ಪಡೆದಿದ್ದಾರೆ.

ಈ ಇಬ್ಬರು ವಿದ್ಯಾರ್ಥಿಗಳು ಚಿಕ್ಕವರಾಗಿದ್ದಾಗಲೇ ಪೋಷಕರನ್ನು ಕಳೆದುಕೊಂಡು ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿದ ಅರುಣಕುಮಾರ ಕಲ್ಗದ್ದೆ, ಈ ಇಬ್ಬರು ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸಕ್ಕೆ ತಗುಲುವ ವೆಚ್ಚವನ್ನು ಭರಿಸುವುದಾಗಿ ಹಾಗೂ ಈ ಇಬ್ಬರನ್ನು ಅವರ ವಿದ್ಯಾಭ್ಯಾಸ ಪೂರ್ಣಗೊಳ್ಳುವವರೆಗೂ ಶೈಕ್ಷಣಿಕವಾಗಿ ದತ್ತು ಪಡೆಯುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭ ವಿಶ್ವಮಾನವ ಫೌಂಡೇಶನ್ ಸಂಸ್ಥಾಪಕಿ ಚಂದ್ರಾವತಿ ಅವರು ಈ ಇಬ್ಬರು ವಿದ್ಯಾರ್ಥಿಗಳ ಯೋಗ ಕ್ಷೇಮವನ್ನು ವಿಶ್ವಮಾನವ ಫೌಂಡೇಶನ್ ನೋಡಿಕೊಳ್ಳುತ್ತದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ವ್ಯವಸ್ಥಾಪಕ ಪ್ರಕಾಶ ಮೊಗವೀರ, ಅಶ್ವಿತ್ ಪೂಜಾರಿ ಉಪ್ಪಳ, ಶಂಕರ ಕಂದಕೂರ, ಶ್ರೀನಿವಾಸ ಕೇಶ್ವಾರ, ಶಿವಶಂಕರ ಯಲಸತ್ತಿ, ಜಲ್ಲಪ್ಪ ಚಿಂತನಹಳ್ಳಿ, ಪ್ರಭುಲಿಂಗ ಗೊಂದೆಡಗಿ, ಆಂಜನೇಯ ಕಟ್ಟಿಮನಿ ರಾಂಪೂರ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles