Sunday, June 8, 2025

ಅಕ್ರಮ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

ಮೂಡುಬಿದಿರೆ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಗೋಕಳ್ಳರನ್ನು ಬಜರಂಗದಳದ ಕಾರ್ಯಕರ್ತರು ತಡೆಗಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆಯ ಕಡಂದಲೆ ಎಂಬಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಕಳೆದ ಕೆಲ ದಿನಗಳಿಂದ ಮೂಡುಬಿದರೆ ಪರಿಸರದಲ್ಲಿ ಗೋಕಳ್ಳತನವು ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಭಜರಂಗದಳದ ಕಾರ್ಯಕರ್ತರು ಗೋಕಳ್ಳರ ಪತ್ತೆಗಾಗಿ ಕಾಯುತ್ತಿದ್ದರು. ಇಂದು ಮುಂಜಾನೆ ಕಡಂದಲೆ ಪಾಲಡ್ಕ ಎಂಬಲ್ಲಿ ಅಕ್ರಮವಾಗಿ ಗೋಕಳ್ಳತನ ಎಸಗುತ್ತಿದ್ದ ನಿಖರ ಮಾಹಿತಿ ಪಡೆದ ಭಜರಂಗದಳದ ಕಾರ್ಯಕರ್ತರು ಸ್ಥಳಕ್ಕೆ ದಾಳಿ ಮಾಡಿದ್ದು, ವಾಹನದಲ್ಲಿದ್ದ ಗೋವುಗಳನ್ನು ಸ್ಥಳದಲ್ಲೇ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ.

ವಿಷಯ ತಿಳಿದ ಮೂಡುಬಿದರೆ ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದು ಗೋಕಳ್ಳತನ ಸೇರಿ ಅನೇಕ ಕ್ರಿಮಿನಲ್ ಆರೋಪಿ ಸಚ್ಚೇರಿಪೇಟೆಯ ಹಮ್ಜಾ ಸಹಿತ ನಾಲ್ವರು ಆರೋಪಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿದ್ದಾರೆ. ನಾಲ್ಕಕ್ಕೂ ಅಧಿಕ ಗೋವುಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles