Sunday, June 8, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದ.ಕ.ಜಿಲ್ಲೆ 20ನೇ ಸ್ಥಾನಕ್ಕೆ ಕುಸಿಯಲು ಬಿಜೆಪಿ ಸರ್ಕಾರ ಕಾರಣ: ಎಂ.ಬಿ.ಸದಾಶಿವ

ಮಂಗಳೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ದ.ಕ.ಜಿಲ್ಲೆಯು 20ನೇ ಸ್ಥಾನಕ್ಕೆ ಕುಸಿಯಲು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಸೃಷ್ಟಿಸಿದ ಗೊಂದಲವೇ ಕಾರಣ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದ್ದಾರೆ.
2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡ ಬೆನ್ನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾವಾರು ಸಾಧನೆಯ ಪಟ್ಟಿಯೊಂದು ಹರಿದಾಡುತ್ತಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಜೆಡಿಎಸ್ ನಾಯಕರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಇದಕ್ಕೆ ಡಬಲ್ ಇಂಜಿನ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
ಆದರೆ ಇದು ನಕಲಿ ಪಟ್ಟಿ ಎಂದು ಹೇಳಲಾಗುತ್ತಿದೆ. ಈ ಪಟ್ಟಿಯ ಪ್ರಕಾರ ಸದಾ ಒಂದು ಅಥವಾ ಎರಡನೇ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದ್ದ ದ.ಕ.ಜಿಲ್ಲೆಯು 20ನೇ ಸ್ಥಾನಕ್ಕೆ ತಳ್ಳಲ್ಪಟ್ಟಿವೆ. ಉಡುಪಿಗೆ 13ನೇ ಸ್ಥಾನ ನೀಡಲಾಗಿದೆ. ಪ್ರಥಮ ಸ್ಥಾನವು ಹಾಸನದ ಪಾಲಾದರೆ, ದ್ವಿತೀಯ ಸ್ಥಾನವು ಚಿಕ್ಕಬಳ್ಳಾಪುರ, ಮೂರನೇ ಸ್ಥಾನವು ಮಂಡ್ಯಕ್ಕೆ ನೀಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles