ಕುಂದಾಪುರ: ಅಕ್ಷಯ ತೃತೀಯದಂದು ಹಿಂದೂಗಳ ಅಂಗಡಿಯಲ್ಲೇ ಖರೀದಿ ಮಾಡಿ. ಅಕ್ಷಯ ತೃತೀಯ ಹಿಂದುಗಳ ಹಬ್ಬ. ಹಿಂದುಗಳ ಹಬ್ಬದಂದು ಹಿಂದುಗಳ ಅಂಗಡಿಯಲ್ಲಿ ಖರೀದಿ ಮಾಡಿದರೆ ಸಂಸ್ಕೃತಿ ಉಳಿಯುತ್ತೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.
ಕುಂದಾಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ರೀತಿ ಸಂಘರ್ಷ ನಿರಂತರ ಮುಂದುವರೆಯುತ್ತದೆ. ಸಮಾಜಕ್ಕೆ, ಜನರಿಗೆ, ದೇಶಕ್ಕೆ ಯಾವುದು ಹಿತ, ಯಾವುದು ಮಾರಕ ಎನ್ನುವುದು ಗೊತ್ತಾಗಿದೆ. ಹಿಂದೂ ಸಂಘಟನೆಗಳಿಂದ ಸಮಾಜ ಜಾಗೃತಿಯಾಗಿದೆ. ಸಮಾಜಕ್ಕೊಂದು ಕಲ್ಪನೆ, ದೃಷ್ಟಿಕೋನ ಸಿಕ್ಕಿದೆ. ಹಿಂದೂಸ್ಥಾನದ ಸುರಕ್ಷತೆಗೆ ಗೋಲ್ಡ್ ಬ್ಯಾನ್ ಅಗತ್ಯ. ಜನರು ಕೂಡ ಇದಕ್ಕೆ ಸ್ಪಂದಿಸುತ್ತಿದ್ದಾರೆ. ಹಲಾಲ್ ಬಗ್ಗೆ ಜನರು ಜಾಗೃತವಾಗಿರುವುದನ್ನು ನಾವು ನೋಡಿದ್ದೇವೆ. ಮುಂದಿನ ದಿನ ಹಲಾಲ್ ಕಟ್ ಮಾಂಸ ಸಂಪೂರ್ಣವಾಗಿ ಹಿಂದೂಗಳು ಖರೀದಿ ಮಾಡುವುದಿಲ್ಲ. ಇದೇ ಮಾದರಿಯ ಹೋರಾಟ ಈ ವಿಚಾರದಲ್ಲೂ ನಡೆಯಲಿದೆ ಎಂದರು.