ಕಾರ್ಕಳ: ತಾಲೂಕಿನ ಹಿರ್ಗಾನ ಚಿಕ್ಕಳ್ ಬೆಟ್ಟು ಪರಿಸರದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಸೆರೆ ಹಿಡಿದರು.
ಸ್ಥಳೀಯ ಪರಿಸರದಲ್ಲಿ ಅನೇಕ ನಾಯಿಗಳ ಹಾಗೂ ಹಸುಗಳ ಮೇಲೆ ದಾಳಿ ನಡೆಸಿದ್ದ ಚಿರತೆಯು ಜನರ ನಿದ್ದೆಗೆಡಿಸಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಕಳ ವಲಯ ಅರಣ್ಯ ಅಧಿಕಾರಿ ಜಿ.ಡಿ.ದಿನೇಶ್, ಉಪವಲಯ ಅರಣ್ಯಾಧಿಕಾರಿ ಪ್ರಕಾಶ್ಚಂದ್ರ, ಅರಣ್ಯ ರಕ್ಷಕ ಉಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.