ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಸಾಮಾಜಿಕ ಹೋರಾಟಗಾರ್ತಿ ಮಲಾಲಾ ಯೂಸುಫ್ ಝಾಯಿ ಅವರು ಕರ್ನಾಟಕದ ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಹಿಜಾಬ್ ವಿವಾದದ ಕುರಿತು “ಶಿಕ್ಷಣ ಮತ್ತು ಹಿಜಾಬ್ ನಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಹಿಜಾಬ್ ಧರಿಸಿ ಬರುವ ಹೆಣ್ಣುಮಕ್ಕಳನ್ನು ಶಾಲೆ ಒಳಗೆ ಬಿಡದೇ ಇರುವುದು ಭಯಾನಕ. ಮಹಿಳೆಯರು ಹೆಚ್ಚು ಅಥವಾ ಕಡಿಮೆ ಧರಿಸುತ್ತಿರುವುದಕ್ಕಾಗಿ ಆಕ್ಷೇಪಣೆ ಮುಂದುವರೆಯುತ್ತಿದೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದು ನಿಲ್ಲಿಸಬೇಕು” ಎಂದು ಮಲಾಲ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕರ್ನಾಟಕದ ಹಿಜಾಬ್ ವಿವಾದ ರಾಷ್ಟ್ರ-ಅಂತಾರಾಷ್ಟ್ರೀಯ ಸುದ್ದಿಯಾಗಿದೆ.