Sunday, June 8, 2025

ಶುಕ್ರವಾರ ನೀಡಲಿರುವ ತಜ್ಞರ ವರದಿ ಆಧರಿಸಿ ಕೊರೋನಾ ನಿಯಮ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿದರು.

ಯಾವ ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆಯಿದೆಯೋ ಆ ಜಿಲ್ಲೆಗಳಲ್ಲಿ ಲಸಿಕೆಯ ಪ್ರಮಾಣ ಹೆಚ್ಚು ಮಾಡಬೇಕು. ಈಗಾಗಲೇ ಹಲವರು ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವೀಕೆಂಡ್ ಕರ್ಫ್ಯೂ ಮಾಡದಂತೆ ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ. ಕೋವಿಡ್ ಮೂರನೇ ಅಲೆಯು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸರ್ಕಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಅನ್ನು ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬುದನ್ನು ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಶುಕ್ರವಾರ ನೀಡಲಿರುವ ವರದಿ ಆಧಾರದ ಮೇಲೆ ಚರ್ಚೆ ಮಾಡಿ ಅಂದೇ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು. 

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಹೊಟೇಲ್ ಮಾಲಿಕರ ಸಂಘ ಭೇಟಿ ಮಾಡಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ. ನಾವು ಕೊರೋನಾ ನಿಯಮವನ್ನು ಪಾಲಿಸುತ್ತೇವೆ. ವೀಕೆಂಡ್ ಕರ್ಫ್ಯೂ ಮಾಡುವುದರಿಂದ ಹೊಟೇಲ್ ಉದ್ಯಮಕ್ಕೆ ಬಹಳ ನಷ್ಟ ಉಂಟಾಗುತ್ತದೆ. ಇದರಿಂದ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಬೇಡ. ಕೊರೋನಾ ನಿಯಮ ಪಾಲಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತೇವೆ ಎಂದು ಮನವಿ ಮಾಡಿಕೊಂಡಿದ್ದಾರೆ.  

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles