ಭಾರತ:ದೇಶದಲ್ಲಿ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ವ್ಯಾಪಕವಾಗಿ ಚಾಚುತ್ತಿದೆ. ಮೂರನೇ ಅಲೆ ಸೃಷ್ಟಿಯಾಗಿರುವ ಈ ವೇಳೆ ಸರ್ಕಾರ ಬಿಗು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಹಾವಳಿಯಿಂದಾಗಿ ಜನರು ತತ್ತರಿಸಿ ಹೋಗಿದ್ದು, ದೇಶದಲ್ಲಿ ನಿನ್ನೆ ಒಂದೇ ದಿನದಲ್ಲಿ 2.47ಲಕ್ಷ ಜನರಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ಹೆಲ್ತ್ ಬುಲೆಟಿನ್ನಲ್ಲಿ ಸ್ಪಷ್ಟೀಕರಿಸಲಾಗಿದೆ. ಆ ಮೂಲಕ ಸೋಂಕಿತರೆ ಸಂಖ್ಯೆ 11.17ಲಕ್ಷಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದಾಗಿ ದೇಶದಲ್ಲಿ ಈವರೆಗೆ 380ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 4.25ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು, ಭಾರತದಲ್ಲಿ ಸದ್ಯ 84,825ಮಂದಿ ಸೋಂಕಿನಿಂದ ಗುಣಮುಖರಾಗಿದ್ದು. ಕೇಂದ್ರ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ ದಿನವೊಂದಕ್ಕೆ ಶೇ.11.05ರಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಸೋಂಕನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತಿದ್ದು, ಸೋಂಕಿನ ಪ್ರಮಾಣ ಹೆಚ್ಚಿರುವ ರಾಜ್ಯಗಳು ಕಠೀಣ ಕಾನೂನು ಕ್ರಮ ಜರುಗಿಸುವ ಮುಖಾಂತರ ಕೊರೊನಾವನ್ನು ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಪ್ರಮಾಣ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶದಲ್ಲಿ ಹೆಚ್ಚಿದ್ದು, ಇದನ್ನು ತಡೆಯಲು ವಿಕೆಂಡ್ ಕಫ್ಯೂ, ಲಾಕ್ ಡೌನ್, ಶಾಲಾ ಕಾಲೇಜು ಬಂದ್ ಮುಂತಾದ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ.