ಮಂಗಳೂರು: ದಕ್ಷಿಣ ಕನ್ನಡದ ಶಾಲಾ ಮಕ್ಕಳಲ್ಲಿ ಹಾಗೂ ಶಿಕ್ಷಕರಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಹಾಗೂ 68 ಶಾಲಾ ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕು ಹೆಚ್ಚಿರುವ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಇದರ ಅನುಸಾರ ಜಿಲ್ಲೆಯಲ್ಲಿ 12 ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಜನವರಿ 1 ರಿಂದ ಜನವರಿ 27 ರ ವರೆಗೆ 421 ಶಾಲಾ ಮಕ್ಕಳಿಗೆ ಹಾಗೂ 68 ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ. ಬೆಳ್ತಂಗಡಿಯಲ್ಲೇ 57 ಶಾಲಾ ಮಕ್ಕಳಿಗೆ ಹಾಗೂ 8 ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
5 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಕೂಡ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.