ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಧಿಸಿದ್ದ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಿ, ಸೇವೆಗಳಿಗೆ ಅನುಮತಿ ನೀಡಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ನ ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ದೇವಸ್ಥಾನಗಳಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸಡಿಲಗೊಳಿಸಿ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುವಂತೆ ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾಧಿಗಳಿಗೆ ಅನುಮತಿ ನೀಡಲಾಗಿದೆ.