ಉಡುಪಿ: ‘ಮಂದಾರ’ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ “ಸಾಂಸ್ಕೃತಿಕ ಕಾರ್ಯಕ್ರಮ” ಬ್ರಹ್ಮಾವರದ ಸಾಲಿಕೇರಿಯ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು.
ಹಿರಿಯ ಯಕ್ಷಗಾನ ಕಲಾವಿದರಾದ ಸುಜಯೀಂದ್ರ ಹಂದೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ ಹಾಗೂ ಭಾಗವತ ಲಂಬೋದರ ಹೆಗಡೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು.



ಮಂದಾರದ ಅಧ್ಯಕ್ಷ ರೋಹಿತ್ ಬೈಕಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಭಾ ಕಾರ್ಯಕ್ರಮದ ನಂತರ ಯಶಸ್ವೀ ಕಲಾವೃಂದ ತೆಕ್ಕಟ್ಟೆ ಇವರಿಂದ ಯಕ್ಷ-ಗಾನ ವೈಭವ ಕಾರ್ಯಕ್ರಮ ಹಾಗೂ ಮ್ಯಾಜಿಕ್ ಫೀಟ್ ಡ್ಯಾನ್ಸ್ ಕ್ರೀವ್ ಚಾಂತಾರು ಅವರಿಂದ ನೃತ್ಯ ಕಾರ್ಯಕ್ರಮ ಜರುಗಿತು. ನಂತರ ತೋರಣ ಕಲಾವಿದರಿಂದ ಕಿರುನಾಟಕ ಪ್ರದರ್ಶನಗೊಂಡಿತು.
ಸಚಿನ್ ಅಂಕೋಲಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.