ಕುಂದಾಪುರ: ತಾಲೂಕಿನ ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಪ.ಜಾ. ಮತ್ತು ಪ.ಪಂ.ದ ಫಲಾನುಭವಿಗಳಿಗೆ ಶೇ. 25ರ ಅನುದಾನದಲ್ಲಿ ವಿವಿಧ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮ ಕುಂದಾಪುರದ ತಲ್ಲೂರು ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮವು ತಲ್ಲೂರು ಗ್ರಾ.ಪಂ. ಅಧ್ಯಕ್ಷೆ ಭೀಮವ್ವ ಅಧ್ಯಕ್ಷತೆಯಲ್ಲಿ ನಡೆಯಿತು.


ಸಮಾರಂಭದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಗ್ರೈಂಡರ್, ಸ್ಟಡಿ ಚೇರ್ ವಿತರಿಸಲಾಯಿತು. ಜೊತೆಗೆ ಮದುವೆ ಸಹಾಯಧನ, ಕಂಪ್ಯೂಟರ್ ತರಬೇತಿ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು.
ಈ ಸಂದರ್ಭ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಉದಯ್ ಕುಮಾರ್ ತಲ್ಲೂರು, ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ನಾಯಕ್, ಸರ್ವ ಸದಸ್ಯರು ಉಪಸ್ಥಿತರಿದ್ದರು.