Sunday, June 8, 2025

ಉಡುಪಿಯಲ್ಲಿ ಡಿಕೆ ಶಿವಕುಮಾರ್‌ ಪಾದಯಾತ್ರೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ಎ.24ರಂದು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಹಮ್ಮಿಕೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಉಡುಪಿ ಸಿಟಿ ಬಸ್ ಸ್ಟಾಂಡ್ ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಬೃಹತ್ ಪಾದಯಾತ್ರೆಯಲ್ಲಿ ಭಾಗಿಯಾದರು.

“ ಮಲ್ಪೆ ಬಂದರಿನಲ್ಲಿ 75 ಮೀನುಗಾರರು ಕಾಲುಜಾರಿ ಸಾವನ್ನಪ್ಪಿದ್ದಾರೆ. ಬಿಜೆಪಿಗರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. ಮೀನುಗಾರರಿಗಾಗಿ ಆಂಬುಲೆನ್ಸ್ ನೀಡಿದವರು ಡಿ.ಕೆ ಶಿವಕುಮಾರ್. ಬಿಜೆಪಿಯ ಬೆಲೆ ಏರಿಕೆಯಿಂದಾಗಿ ಇಂದು 1 ಕೆ.ಜಿ ಅಕ್ಕಿ ಖರೀದಿಸಲು ಸಾಧ್ಯವಾಗುತ್ತಿಲ್ಲ.“ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಕಾಂಗ್ರೆಸ್ ನಾಯಕರಾದ ಎಂ.ಎ ಗಫೂರ್, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles