Saturday, June 7, 2025

ಏ.2-ಏ.8: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಉಡುಪಿ: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದೊಂದಿಗೆ ಏ.2 ರಿಂದ ಏ.8ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳ ವಿವರ:

  • ಏ.3 ರಂದು ಕಪಿಲ ಮಹರ್ಷಿಗಳ ಬಿಂಬ ಪ್ರತಿಷ್ಠೆ
  • ಏ.6 ರಂದು ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಕುಬೇರ ಚಿತ್ರಲೇಖಾ ಸಹಿತ ಶ್ರೀಮಹಾಲಕ್ಷ್ಮೀ ದೇವರ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ, ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಪಂಚವಿಂಶತಿ ದ್ರವ್ಯಮಿಳಿತ ಅಷ್ಟೋತ್ತರ, ಶತಬ್ರಹ್ಮ ಕುಂಭಾಭಿಷೇಕ, ವಾರ್ಷಿಕ ರಂಗಪೂಜಾ ಮಹೋತ್ಸವ, ಬಲಿ ಉತ್ಸವ
  • ಏ.7 ರಂದು ಶ್ರೀ ಕುಬೇರ ಚಿತ್ರಲೇಖಾ ಸಹಿತ ಶ್ರೀಮಹಾಲಕ್ಷ್ಮೀ ದೇವರಿಗೆ ಪಂಚವಿಂಶತಿ ದ್ರವ್ಯ ಮಿಳಿತ ಅಷ್ಟೋತ್ತರ, ಶತಬ್ರಹ್ಮ ಕುಂಭಾಭಿಷೇಕ
  • ಏ.8 ರಂದು ಶ್ರೀ ಚಂಡಿಕಾಯಾಗ, ಮಹಾ ಸಂಪ್ರೋಕ್ಷಣೆ, ಮಹಾಮಂತ್ರಾಕ್ಷತೆ

ಕಾರ್ಯಕ್ರಮದಲ್ಲಿ ಧರ್ಮದರ್ಶಿಗಳಾದ ಶ್ರೀ ರಮಾನಂದ ಗುರೂಜಿ, ನಿಯೋಜಿತ ತಂತ್ರಿಗಳಾದ ವೇ|ಮೂ| ಕೃಷ್ಣಮೂರ್ತಿ ತಂತ್ರಿ, ನಿಯೋಜಿತ ಅರ್ಚಕರಾದ ಅನೀಶ್ ಆಚಾರ್ಯ, ಬಾಲಸುಬ್ರಹ್ಮಣ್ಯ ರಾವ್, ಆಡಳಿತ ಮಂಡಳಿಯ ಉ‍ಷಾ ರಮಾನಂದ ಅವರು ಭಾಗವಹಿಸಲಿದ್ದಾರೆ. ನಿರಂತರ ಅನ್ನಸಂತರ್ಪಣೆಯೊಂದಿಗೆ ಬಹು ವಿಜೃಂಭಣೆಯಿಂದ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles