Wednesday, June 18, 2025

ಡಾ. ಸ್ಮಿತಾ ರಾಮು ಬಂಟ್ವಾಳ ತಹಶೀಲ್ದಾರ್ ಆಗಿ ನೇಮಕ

ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, ಕೆಎಎಸ್ ಅಧಿಕಾರಿ ಡಾ. ಸ್ಮಿತಾ ರಾಮು ಅವರನ್ನು ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಈ ಹಿಂದೆ ರಶ್ಮಿ ಎಸ್.ಆರ್ ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಇದೀಗ ಈ ಹುದ್ದೆಗೆ ಡಾ.ಸ್ಮಿತಾ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಡಾ. ಸ್ಮಿತಾ ಅವರು ಮೂಲತಃ ದಂತ ವೈದ್ಯೆಯಾಗಿದ್ದಾರೆ.
ಮಂಗಳೂರಿನ ಏನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು, ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles