Sunday, June 8, 2025

ಕ.ರಾ.ವೈ.ಸಂ. ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ.ಸುಬ್ರಹ್ಮಣ್ಯ ಭಟ್ ಆಯ್ಕೆ

ಉಡುಪಿ: ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಗಳನ್ನು ಬೆಳೆಸುವುದರೊಂದಿಗೆ ಮೌಢ್ಯವನ್ನು ತೊಡೆದುಹಾಕುವ ಮತ್ತು ಹಲವಾರು ಪ್ರಗತಿಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ (ಕ.ರಾ.ವೈ.ಸಂ.) ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ.ಸುಬ್ರಹ್ಮಣ್ಯ ಭಟ್ ಬೈಂದೂರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಉಡುಪಿಯಲ್ಲಿ ನಡೆದ ಸಂಘಟನೆಯ ಸದಸ್ಯರ ಸಭೆಯಲ್ಲಿ ವೃತ್ತಿಯಲ್ಲಿ ವೈದ್ಯರು ಮತ್ತು ಬೈಂದೂರಿನ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಭಟ್ ಅವರನ್ನು ಕ.ರಾ.ವೈ.ಸಂ. ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕ.ರಾ.ವೈ.ಸಂ. ಪರಿಷತ್ತಿನ ಗೌರವಾಧ್ಯಕ್ಷರಾಗಿ ಜಗನ್ನಾಥ ಪನ್ಸಾಲೆ, ಉಪಾಧ್ಯಕ್ಷರಾಗಿ ವಸಂತಿ ಶೆಟ್ಟಿ ಬ್ರಹ್ಮಾವರ ಮತ್ತು ಚಂದ್ರ ನಾಯ್ಕ್.ಎಚ್., ಪ್ರಧಾನ ಕಾರ್ಯದರ್ಶಿಯಾಗಿ ಡಾ.ಕಿಶೋರಕುಮಾರ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಹರೀಶ ಕಟಪಾಡಿ, ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಎಚ್, ಕೋಶಾಧ್ಯಕ್ಷರಾಗಿ ಪ್ರಕಾಶ ಹೆಬ್ಬಾರ್, ಸಂಚಾಲಕರಾಗಿ ಸುಕುಮಾರ್ ಮುನಿಯಾಲ್‌, ಹಾಗೂ ಇಂದಿರಾ ಬುಡ್ನಾರ್ ಅವರನ್ನು, ನಿರ್ದೇಶಕರಾಗಿ ಬೈಕಾಡಿ ಮಂಜುನಾಥ ರಾವ್ ಶಿವಪುರ, ಡಾ.ಕೆ.ಪಿ.ಮಹಾಲಿಂಗಯ್ಯ, ವೆಂಕಟೇಶ ಭಟ್, ಗಣಪತಿ ಹೋಬಳಿದಾರ, ಜಗದೀಶ ದೇವಾಡಿಗ, ಅನ್ನಪೂರ್ಣ ಸಿದ್ಧೇಶಪ್ಪ, ಸೀತಾನದಿ ವಿಜೇಂದ್ರ ಶೆಟ್ಟಿ ಹೆಬ್ರಿ, ಶಿವಪುರ ಮುರಳೀಧರ್‌ ಭಟ್‌ ಹೆಬ್ರಿ, ಡಾ.ಕಾಂತಿ ಹರೀಶ್, ಶಾಂತಿ ಪಿರೇರಾ ಅವರನ್ನು ಆಯ್ಕೆಮಾಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles