ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಜನವರಿ 01, 2022 ರ ಅರ್ಹತಾ ದಿನಾಂಕಕ್ಕೆ 18 ವರ್ಷ ತುಂಬಿದ ಕೃಷಿಕರು ಕೃಷಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಕರ್ನಾಟಕ ವ್ಯವಸಾಯೋತ್ನನ್ನ ಮಾರುಕಟ್ಟೆ ಸಮಿತಿಗಳಿಗೆ ನೀಡಲು ಆಯಾಯ ತಾಲೂಕಿನ ತಹಶೀಲ್ದಾರರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಲಾಗಿರುತ್ತದೆ.
ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಸಂಬಂಧಪಟ್ಟ ಅಧಿಕಾರಿಗಳು ಕೃಷಿಕ ಮತದಾರರ ಪಟ್ಟಿಗಳನ್ನು ಪಹಣಿ ಪತ್ರಿಕೆಯ ಆಧಾರದಲ್ಲಿ ತಯಾರಿಸಲು ಜನವರಿ 17 ಕೊನೆಯ ದಿನವಾಗಿದೆ. ಕೃಷಿಕ ಮತದಾರರ ಪಟ್ಟಿಯ ಕರಡು ಪ್ರಕಟಣೆಯನ್ನು ಜನವರಿ 18 ರಂದು ಪ್ರಕಟಿಸಬೇಕು. ಜನವರಿ 18 ರಿಂದ ಫೆಬ್ರವರಿ 2 ರ ವರೆಗೆ ಮತದಾರರ ಕರಡು ಪಟ್ಟಿಗಳಿಗೆ ಹಕ್ಕು
ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ 3 ರಿಂದ 6 ರ ವರೆಗೆ ಮತದಾರರ ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿ ಮತ್ತು ತಿದ್ದುಪಡಿ ಮಾಡಿ, ಫೆ. 7 ರಂದು ಕೃಷಿಕ ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಹೊರಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 ವರ್ಷ ತುಂಬಿದ ಕೃಷಿಕರು ಕೃಷಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ
Subscribe
Login
0 Comments