ಕಾಪು: ಶ್ರೀಮತಿ ಪದ್ಮಾವತಿ.ಪಿ ಗುರ್ಮೇ ಅವರ 4ನೆ ಪುಣ್ಯತಿಥಿ ಪ್ರಯುಕ್ತ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮವನ್ನು ಗುರ್ಮೆ ಫೌಂಡೇಶನ್ ವತಿಯಿಂದ ಫೆ.20ರಂದು ಕಾಪು ತಾಲೂಕಿನ ಗುರ್ಮೆ ಕಳತ್ತೂರು ಇಲ್ಲಿ ಸಂಜೆ 4ಕ್ಕೆ ಹಮ್ಮಿಕೊಳ್ಳಲಾಗಿದೆ.
ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೌರಿಗದ್ದೆ ಸ್ವರ್ಣ ಪೀಠಿಕಾಪುರದ ಶ್ರೀ ವಿನಯ ಗುರೂಜಿ, ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಉಡುಪಿ ಶಾಸಕರು ರಘುಪತಿ ಭಟ್, ಕಾಪು ಶಾಸಕರು ಲಾಲಾಜಿ.ಆರ್ ಮೆಂಡನ್, ಬೆಂಗಳೂರು ಎಂಆರ್ಜಿ ಗ್ರೂಪ್ಸ್ ಛೇರ್ಮನ್ ಕೆ.ಪ್ರಕಾಶ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮೋಹನ್ ಆಳ್ವ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನೇರಪ್ರಸಾರವು ಸಂಜೆ 4 ಗಂಟೆಗೆ ನಮ್ಮ ಕಾಪು ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ.