ಕಾರ್ಕಳ: ಹೆಬ್ರಿ ತಾಲೂಕಿನಲ್ಲಿ ಫೆ.12 ರಿಂದ 19 ರವರೆಗೆ ನಡೆಯಲಿರುವ ಕಡತ ವಿಲೇವಾರಿ ಸಪ್ತಾಹದ ಉದ್ಘಾಟನಾ ಸಮಾರಂಭವು ಕಾರ್ಕಳ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಕಡತ ವಿಲೇವಾರಿ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಸಚಿವ ಸುನಿಲ್ ಕುಮಾರ್, ಕೊರೊನಾದಿಂದಾಗಿ ಬಾಕಿ ಉಳಿದಿರುವ ಎಲ್ಲಾ ಇಲಾಖೆಗಳ ಕಡತ ವಿಲೇವಾರಿಗೆ ಸಪ್ತಾಹವನ್ನು ಆಯೋಜಿಸಲಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ಸಾಮಾನ್ಯ ವ್ಯಕ್ತಿಯೂ ಕೂಡ ಸರಳ ರೀತಿಯಲ್ಲಿ ತಮ್ಮ ಕೆಲಸ ಮಾಡಿಕೊಳ್ಳುವ ಹಾಗೆ ನಮ್ಮ ಆಡಳಿತ ವ್ಯವಸ್ಥೆಯನ್ನು ಚುರುಕು ಮಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಮುಖ್ಯಾಧಿಕಾರಿ ರೂಪ ಶೆಟ್ಟಿ, ತಹಶೀಲ್ದಾರ್ ಪುರಂದರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಂದಾಪುರ ಸಹಾಯಕ ಕಮಿಷನರ್ ರಾಜು ಪ್ರಸ್ತಾವನೆಗೈದರು, ಸಂಜಯ್ ಕಾರ್ಯಕ್ರಮ ನಿರ್ವಹಿಸಿದರು.