ಉಡುಪಿ: ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, ಇಬ್ಬರು ಹುಡುಗಿಯರನ್ನು ಉಡುಪಿ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಲಾಡ್ಜ್ ನ ಮೇಲೆ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಗುರುರಾಜ್, ವಿಜಯ ಶೆಟ್ಟಿ, ಹೇಮಂತ್, ಸಂದೀಪ್ ಮೊಗವೀರ ಎಂದು ತಿಳಿದು ಬಂದಿದೆ.
ಇಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಠಾಣೆ ಇನ್ಸ್ಪೆಕ್ಟರ್ ಜಯಂತ್ ಮತ್ತು ಅವರ ತಂಡ ಐದು ಮಂದಿ ಮೇಲೆ ಕೇಸು ದಾಖಲಿಸಿಕೊಂಡು, ಬಂಧಿತ ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.