Sunday, June 8, 2025

ಎಲ್ಲೂರು ಗ್ರಾ.ಪಂ ವ್ಯಾಪ್ತಿಯ ತಾಜ್ಯ ಸಮಸ್ಯೆಗೆ ಮುಕ್ತಿ ಕೊಡಿಸಿ:ವಿನಯ ಕುಮಾರ್ ಸೊರಕೆ ಆಗ್ರಹ

ಕಾಪು:ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುಗುಂಡಿಯಲ್ಲಿ ಪುರಸಭೆ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ ಗ್ರಾ. ಪಂ. ಗಳಲ್ಲಿನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ 10 ಎಕರೆ ಜಾಗ ಸಹಿತವಾಗಿ ೫ ಕೋಟಿ ರೂಪಾಯಿ ಅನುದಾನ ನೀಡಿದ್ದು, ಅದರಲ್ಲಿ ಎಲ್ಲೂರು ಮತ್ತು ಪುರಸಭೆ ಮಾತ್ರವಲ್ಲದೆ ಸುತ್ತಮುತ್ತಲಿನ ಇತರ ಗ್ರಾಮಗಳ ಕಸ ತ್ಯಾಜ್ಯ ಸಂಗ್ರಹಣೆಗೂ ಅವಕಾಶ ಮಾಡಿಕೊಡುವಂತೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗ್ರಹಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸ ವಿಲೇವಾರಿ ಸಂಪೂರ್ಣ ಜಿಲ್ಲಾಡಳಿತದ ಜವಬ್ದಾರಿಯಾಗಿದೆ. ವಿಲೇವಾರಿಗೆ ವಿಶೇಷ ಆದ್ಯತೆ ವಹಿಸಬೇಕಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ತ್ಯಾಜ್ಯದ ಸಮಸ್ಯೆಗೆ ಮುಕ್ತಿ ದೊರಕಿಸಿಕೊಡುವ ನಿಟ್ಟಿನಲ್ಲಿ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಮುಕ್ತಿ ನೀಡುವ ಸಲುವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ, ಗ್ರಾಮ ಪಂಚಾಯತ್, ಜನಪ್ರತಿನಿಧಿಗಳ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ ಎಂದರು.
ಕಾಪು ಕ್ಷೇತ್ರದ ವಿವಿಧೆಡೆ ಸಮುದ್ರಕೊರೆತ ತಡೆಗೆ ತಡೆಗೋಡೆ ನಿರ್ಮಿಸುವಂತೆ ಸರ್ಕಾರ, ಜಿಲ್ಲಾಡಳಿತಕ್ಕೆ ಒತ್ತಾಯಿಸಲಾಗಿದ್ದು, ಕಾಮಗಾರಿ ಪ್ರಾರಂಭಗೊAಡಿದೆ. ಆದರೆ 79 ಕೋಟಿ ಪಡುಕೆರೆ, 69 ಕೋಟಿ ಉಚ್ಚಿಲದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಬಿಡುಗಡೆಯಾಗಿತ್ತು. ಆದರೆ ಅದರ ಸಮರ್ಪಕ ವಿನಿಯೋಗವಾಗಿಲ್ಲ ಎಂಬ ಸಂಶಯವಿದೆ. ಅದಕ್ಕಾಗಿ ಆರ್‌ಟಿಐನಲ್ಲಿ ದಾಖಲೆ ಕೇಳಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಪುದ್ದೀನ್ ಶೇಖ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್, ಕಾಂಗ್ರೆಸ್ ಮುಖಂಡ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles