ಸುಳ್ಯ: ಸರ್ಕಾರಿ ಬಸ್ಸೊಂದು ರಸ್ತೆ ಪಕ್ಕದ ಹೊಳೆಗೆ ಬಿದ್ದು 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಗುರುವಾರ ನಡೆದಿದೆ.
ಧರ್ಮಸ್ಥಳದಿಂದ ಗುಂಡ್ಲುಪೇಟೆ ಕಡೆ ಹೊರಟಿದ್ದ ಸರ್ಕಾರಿ ಬಸ್ನ ಟಯರ್ ಬ್ಲಾಸ್ಟ್ ಆದ ಕಾರಣ ಈ ಘಟನೆ ಸಂಭವಿಸಿದೆ. ಬಸ್ ರಸ್ತೆ ಪಕ್ಕದ ಸುಮಾರು 25 ಅಡಿ ಆಳದಲ್ಲಿ ಹರಿಯುತ್ತಿದ್ದ ಹೊಳೆಗೆ ಇಳಿದಿದ್ದು, ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದ ಪರಿಣಾಮ ಭಾರೀ ಅನಾಹುತ ತಪ್ಪಿದೆ.
ಘಟನೆಯಲ್ಲಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳಿಗೆ ಸುಳ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.